- Advertisement -
- Advertisement -
ಕಾರವಾರ: ಅತ್ತ ಜೆಡಿಎಸ್ನಲ್ಲಿ ಹಾಸನ ಟಿಕೆಟ್ ವಿಚಾರವಾಗಿ ಕುಟುಂಬ ಕಲಹ ಜೋರಾಗಿದೆ. ಕುಮಾರಸ್ವಾಮಿಯವರ ಪಂಚರತ್ನ ಯಾತ್ರೆ ಪಂಚರ್ ಆಗಿದೆ. ಇನ್ನು ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಕ್ಷೇತ್ರವೇ ಸಿಗದೇ ಒದ್ದಾಡುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಭಟ್ಕಳದ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಮಾತನಾಡಿದ ಕಟೀಲ್, ಕಾಂಗ್ರೆಸ್ ಕ್ಷೇತ್ರ ಹುಡುಕಾಡುವಂತ ಹೀನಾಯ ಸ್ಥಿತಿ ತಲುಪಿದೆ. ಕಾಂಗ್ರೆಸ್ನಲ್ಲಿ ಸಿಎಂ ಖುರ್ಚಿಗಾಗಿ ಕಿತ್ತಾಟ ಶುರುವಾಗಿದೆ, ಖರ್ಗೆ ಪರಮೇಶ್ವರ್ ರೀತಿಯಲ್ಲೇ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ನನ್ನೂ ಮುಗಿಸ್ತಾರೆ ಎಂದರು.
- Advertisement -