Sunday, May 5, 2024
Homeಕರಾವಳಿಉಡುಪಿಉಡುಪಿ; ಒಂದು ವಾರವಾದ್ರೂ ಸಿಗದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಆರೋಪಿಗಳ ಸುಳಿವು; ದೈವದ ಮೊರೆ...

ಉಡುಪಿ; ಒಂದು ವಾರವಾದ್ರೂ ಸಿಗದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಆರೋಪಿಗಳ ಸುಳಿವು; ದೈವದ ಮೊರೆ ಹೋದ ಕುಟುಂಬಸ್ಥರು

spot_img
- Advertisement -
- Advertisement -

ಉಡುಪಿ; ಪಾಂಗಾಳ ಶರತ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಒಂದು ವಾರ ಕಳೆದ್ರೂ ಇನ್ನೂ ಕೂಡ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿಲ್ಲ. ಹೀಗಾಗಿ ಮೃತ ಶರತ್‌ ಶೆಟ್ಟಿ ಕುಟುಂಬದವರು ಶುಕ್ರವಾರ ರಾತ್ರಿ ದೈವದ ಮೊರೆ ಹೋಗಿದ್ದಾರೆ.

ಶರತ್‌ ಶೆಟ್ಟಿ ಕಳೆದ ಭಾನುವರ ಪಾಂಗಾಳ ಪಡ್ಪುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಕೊಲೆ ಪ್ರಕರಣದ ಬಳಿಕ ಉಡುಪಿ ಎಸ್ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್‌ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು, ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ

ಈ ನಡುವೆ ಮೃತ ಶರತ್‌ ಶೆಟ್ಟಿ ಅವರ ಬಾವ ಚಂದ್ರಹಾಸ ಶೆಟ್ಟಿ ಮಂಡೇಡಿ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ

ಪಾಂಗಾಳದಲ್ಲಿ ಕಾರಣಿಕ ಮೆರೆಯುತ್ತಿರುವ ಪಾಂಗಾಳ ಪಡು³ ಬಬ್ಬುಸ್ವಾಮಿಯ ನೇಮದ ದಿನದಂದೇ ಎಲ್ಲರಿಗೆ ಬೇಕಾದ ವ್ಯಕ್ತಿಯನ್ನು ಕೊಲೆಗೈದು, ಊರಿಗೆ ಕಳಂಕ ತಂದಿರುವ ಆರೋಪಿಗಳು ಯಾರೇ ಆಗಿರಲಿ, ಎಲ್ಲೇ ಅಡಗಿರಲಿ, ಅವರನ್ನು ಶೀಘ್ರ ಕಾನೂನಿನ ಬಲೆಗೆ ಸಿಲುಕಿಸುತ್ತೇನೆ. ಅವರು ಮಾಡಿದ ತಪ್ಪಿಗೆ ಸೂಕ್ತ ಶಿಕ್ಷೆ ಅನುಭವಿಸುತ್ತಾರೆ. ಕಾನೂನಿನ ಶಿಕ್ಷೆಯೊಂದಿಗೆ ದೈವಗಳ ಶಿಕ್ಷೆಯೂ ಅವರಿಗೆ ಕಾದಿದೆ. ಹತ್ತು ದಿನದೊಳಗೆ ಎಲ್ಲಾ ಆರೋಪಿಗಳೂ ಪೊಲೀಸರ ವಶದಲ್ಲಿರುವಂತೆ ನೋಡಿಕೊಳ್ಳುತ್ತೇವೆ ಎಂದು ಧೂಮಾವತಿ ದೈವವು ಕುಟುಂಬದವರಿಗೆ ಅಭಯ ನೀಡಿದೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!