Monday, May 6, 2024
HomeUncategorizedಪಾಂಗಾಳದಲ್ಲಿ ಫೆಬ್ರವರಿ 23 ರಂದು ನಡೆಯಲಿದೆ  ವೈಭವದ ಸಿರಿಜಾತ್ರೆ

ಪಾಂಗಾಳದಲ್ಲಿ ಫೆಬ್ರವರಿ 23 ರಂದು ನಡೆಯಲಿದೆ  ವೈಭವದ ಸಿರಿಜಾತ್ರೆ

spot_img
- Advertisement -
- Advertisement -

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ 23 , 02 , 2024 ಶುಕ್ರವಾರದಂದು ಜರಗಲಿರುವುದು.

ತಾ 23-02-2024 ನೇ ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು.

ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ , ರಾತ್ರಿ 2:30 ಕ್ಕೆ ಬ್ರಹ್ಮಮಂಡಲ ,ರಾತ್ರಿ 3:30 ಕ್ಕೆ ಭೂತಬಲಿ , ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ.ತಾ. 24.02.2024 ನೇ ಶನಿವಾರ ಬೆಳಿಗ್ಗೆ 11-00 ಕ್ಕೆ ಮಹಾಪೂಜೆ ,ಸಂಜೆ 7-00 ಕ್ಕೆ ತಪ್ಪಂಗಾಯಿ ಬಲಿ , ರಾತ್ರಿ 8:30 ಕ್ಕೆ ದೂಳು ಮಂಡಲ ,ನಂತರ ಭೂತಬಲಿ , ಕವಾಟಬಂಧನ ,ಶಯನೋತ್ಸವ

ತಾ.25.02.2024 ನೇ ಗುರುವಾರ  ಬೆಳಿಗ್ಗೆ 07-00 ಕ್ಕೆ ಕವಾಟೋದ್ಘಾಟನೆ  , ನಂತರ ಮಹಾಪೂಜೆ ,ಸಾಯಂಕಾಲ 05:00 ಕ್ಕೆ ಬಲಿ ಹೊರಟು ಕಟ್ಟೆಪೂಜೆ , ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ.

ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ , ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ , ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ದೇವಸ್ಥಾನದ ಪತ್ರಿಕಾ ಪ್ರಕಟಣೆಯು ತಿಳಿಸಿದೆ

- Advertisement -
spot_img

Latest News

error: Content is protected !!