- Advertisement -
- Advertisement -
ಪಂಜ: ಕೊರೊನಾ ಮಹಾಮಾರಿ ದೇಶದಲ್ಲಿ ತಾಂಡವವಾಡುತ್ತಿರುವುದರಿಂದ ನಾಳೆ ನಡೆಯಬೇಕಾಗಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಂಕೇತಿಕವಾಗಿ ಮತ್ತು ಸರಳವಾಗಿ ಆಚರಿಸಲು ಸರ್ಕಾರ ಆದೇಶಿಸಿದೆ.
ಈ ನಡುವೆ ನಾಳೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸುಳ್ಯ ತಾಲೂಕಿನ ಪಂಜ ಗ್ರಾಮ ಪಂಚಾಯತ್ ನ ಕಾರ್ಯಾಲಯವನ್ನು ಸ್ವತಃ ಪಂಚಾಯತ್ ನ ಆಡಳಿತ ಅಧಿಕಾರಿಯೊಬ್ಬರು ಸ್ವಚ್ಚಗೊಳಿಸಿರುವ ಮಾದರಿ ಕಾರ್ಯ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
ಹೌದು, ಪಂಜ ಗ್ರಾಮ ಪಂಚಾಯತ್ ನ ಆಡಳಿತ ಅಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಈ ಮಾದರಿ ಕೆಲಸ ಮಾಡಿದವರು. ಸದಾ ಸಮಾಜಮುಖಿ ಚಿಂತನೆ ಮೂಲಕ ಪಂಜ ಪರಿಸರದ ಜನತೆಯ ಮೆಚ್ಚುಗೆಗೆ ಪಾತ್ರವಾಗಿರುವ ಇವರು ಕೆಲದಿನಗಳ ಹಿಂದೆ ನಿರಾಶ್ರಿತ ಮಹಿಳೆಯೊಬ್ಬರಿಗೆ ಮನೆ ನಿರ್ಮಿಸಿಕೊಡುವ ನೆೇತೃತ್ವವನ್ನು ವಹಿಸಿಕೊಂಡಿದ್ದರು.
- Advertisement -