- Advertisement -
- Advertisement -
ನೆಲಮಂಗಲ: ಮಗಳ ಅಂತರ್ಜಾತಿ ವಿವಾಹಕ್ಕೆ ಮನನೊಂದ ದಂಪತಿ ಮನೆ ಸಂಪ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದ ನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
![](https://assets-news-bcdn.dailyhunt.in/cmd/resize/400x400_80/fetchdata16/images/41/93/84/419384c064e2e7b72ec955e7e8f7278118dc3c1342e981a81df27fbdb15ab5ef.jpg)
ಹಾರೋಕ್ಯಾತನಹಳ್ಳಿ ನಿವಾಸಿ ಶಿವಲಿಂಗಸ್ವಾಮಿ (51), ಚಂದ್ರಕಲಾ (46) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಶಿವಲಿಂಗಸ್ವಾಮಿ ಅವರು ಗಾರ್ಮೆಂಟ್ಸ್ ವೊಂದರಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಗೃಹಿಣಿ.
ಈ ದಂಪತಿಯ ಪುತ್ರಿ ಸೌಮ್ಯ, ನಿನ್ನೆ ಬೇರೆ ಜಾತಿಯ ಯುವಕನೊಬ್ಬನೊಂದಿಗೆ ವಿವಾಹ ಮಾಡಿಕೊಂಡಿದ್ದು, ಇದು ದಂಪತಿಗೆ ಇಷ್ಟವಾಗಿರಲಿಲ್ಲ. ಅದೇ ಕಾರಣಕ್ಕೆ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
![](https://assets-news-bcdn.dailyhunt.in/cmd/resize/400x400_80/fetchdata16/images/91/92/e2/9192e211d56568542c5c69a05f331849a39952aa4b35a8b156108ef85c39673b.jpg)
ಸಂಪ್ ಬಳಿ ನಮ್ಮ ಸಾವಿಗೆ ನಾವೇ ಜವಾಬ್ದಾರರು ಎಂಬ ಡೆತ್ ನೋಟ್ ಸಿಕ್ಕಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -