- Advertisement -
- Advertisement -
ಉಡುಪಿ: ಪಠ್ಯ ಪುಸ್ತಕದಲ್ಲಿರುವ ಅಧ್ಯಾಯಗಳನ್ನು ಕೈ ಬಿಟ್ಟಿದ್ದಕ್ಕೆ ಅನ್ಯಕೋಮಿನ ಶಿಕ್ಷಕಿಯ ವಿರುದ್ಧ ಹಿಂದೂ ಪೋಷಕರು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕಾಪುವಿನ ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪಠ್ಯ ಪುಸ್ತಕದಲ್ಲಿರುವ ಎರಡು ಅಧ್ಯಾಯಗಳನ್ನು ಕೈಬಿಟ್ಟಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಮಾಜ ವಿಜ್ಞಾನ ಪಠ್ಯದಲ್ಲಿರುವ ಎರಡು ಅಧ್ಯಾಯಗಳನ್ನು ಉದ್ದೇಶಪೂರ್ವಕವಾಗಿ ಬೋಧಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಮಧ್ಯೆ ಹಿಂದೂ ಸಂಘಟನೆಗಳ ಮುಖಂಡರು ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದ್ದು, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
- Advertisement -