- Advertisement -
- Advertisement -
ಕುಂದಾಪುರ : ವಿದ್ಯಾರ್ಥಿಗಳಿಗೆ ಬೂಟುಕಾಲಿನಲ್ಲಿ ತುಳಿಯುತ್ತಿದ್ರು ಎಂಬ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೋಷಕರು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ಎಂಬಲ್ಲಿ ನಡೆದಿದೆ.
ಇಲ್ಲಿನ ಶಾಲೆಯ ದೈಹಿಕ ಶಿಕ್ಷಕರಾದ ದಯಾನಂದ ಬಳ್ಕೂರು ಹೇಳಿದ ಕೆಲಸ ಮಾಡದ ವಿದ್ಯಾರ್ಥಿಗಳಿಗೆ ಬೂಟುಗಾಲಿನಲ್ಲಿ ತುಳಿಯುತ್ತಿದ್ದರು ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಪೋಷಕರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Advertisement -