Sunday, April 28, 2024
Homeಕರಾವಳಿಪರೇಶ್‌ ಮೇಸ್ತಾ ಪ್ರಕರಣ: 122 ಜನರ ವಿರುದ್ಧ ದಾಖಲಾಗಿದ್ದ ಕೇಸ್‌ ಹಿಂಪಡೆದ ಸರ್ಕಾರ

ಪರೇಶ್‌ ಮೇಸ್ತಾ ಪ್ರಕರಣ: 122 ಜನರ ವಿರುದ್ಧ ದಾಖಲಾಗಿದ್ದ ಕೇಸ್‌ ಹಿಂಪಡೆದ ಸರ್ಕಾರ

spot_img
- Advertisement -
- Advertisement -

ಕಾರವಾರ: ಪರೇಶ್ ಮೇಸ್ತಾ ಸಾವಿಗೆ ಸಂಬಂಧಿಸಿದಂತೆ ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ವಿರುದ್ಧ ದಾಖಲಾಗಿದ್ದ ಕೇಸ್ನ ಸರ್ಕಾರ ಹಿಂಪಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಕಾಗೇರಿ, ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 122 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಆ ಎಲ್ಲಾ ಕೇಸ್‌ನ ಸರ್ಕಾರ ಹಿಂಪಡೆದಿದೆ.

2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಇದು ಕೋಮು ದ್ವೇಷದಿಂದಲೇ ಆದ ಹತ್ಯೆ. ಇದೊಂದು ಕೊಲೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈ ಸಂಬಂಧ ಶಿರಸಿಯಲ್ಲಿ ದೊಡ್ಡ ಗಲಭೆಯೇ ನಡೆದಿತ್ತು. ಗಲಭೆಯಲ್ಲಿ 122 ಜನರ ಮೇಲಿದ್ದ ಕೇಸ್ನ ಸರ್ಕಾರ ಹಿಂಪಡೆದಿದೆ.

- Advertisement -
spot_img

Latest News

error: Content is protected !!