- Advertisement -
- Advertisement -
ಉಡುಪಿ; ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಓ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉಪ್ಪೂರಿನಲ್ಲಿ ನಡೆದಿದೆ. ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಇನಾಯತುಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ್ ಬಂಧಿತರು.
ಇವರಿಬ್ಬರು ರವಿ ಡಿಲಿಮಾ ಎಂಬವರಲ್ಲಿ 9/11 ಕೆಲಸಕ್ಕಾಗಿ 13,300ರೂಪಾಯಿ ಲಂಚದ ಬೇಡಿಕೆಯೊಡ್ಡಿದ್ದರು. ರವಿ ಈ ಬಗ್ಗೆ ರವಿ ಡಿಲಿಮಾ ಉಡುಪಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಅದರಂತೆ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಸಂಜಯ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .
- Advertisement -