- Advertisement -
- Advertisement -
ಕಾಪು: ನವಿಲೊಂದು ಬಸ್ ಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ನಡೆದಿದೆ.ಮಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮೂಳೂರು ಪೆಟ್ರೋಲ್ ಬಂಕ್ ಬಳಿ ಸಂಚರಿಸುತ್ತಿದ್ದಾಗ ಹಠಾತ್ ಆಗಿ ಅಡ್ಡ ಬಂದ ನವಿಲು ಡಿಕ್ಕಿ ಹೊಡೆದು ಮೃತ ಪಟ್ಟಿದೆ.
ವಿಚಾರ ತಿಳಿದ ಉಪ ವಲಯ ಅರಣ್ಯಾಧಿಕಾರಿ ಜೀವನ್ದಾಸ್ ಶೆಟ್ಟಿ, ಫಾರೆಸ್ಟ್ ಗಾರ್ಡ್ ಮಂಜುನಾಥ್, ಚರಣ್ ರಾಜ್ ಜೋಗಿ ಮೊದಲಾದವರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.
- Advertisement -