Thursday, May 23, 2024
Homeಕರಾವಳಿಉಡುಪಿಯೋಗಿ ಆದಿತ್ಯನಾಥ್ ಪದಗ್ರಹಣ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಭಾಗಿ

ಯೋಗಿ ಆದಿತ್ಯನಾಥ್ ಪದಗ್ರಹಣ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಭಾಗಿ

spot_img
- Advertisement -
- Advertisement -

ನವದೆಹಲಿ: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ನಿನ್ನ ಯೋಗಿ ಆದಿತ್ಯನಾಥ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ  ಶ್ರೀ  ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ವಿಶೇಷ ಆಹ್ವಾನಿತರಾಗಿ ಭಾಗಿಯಾದರು.ರಾಜ್ಯದಿಂದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ , ಇಸ್ಕಾನ್ ನ‌ ಮಧುಪಂಡಿತ ದಾಸ್ ಕೂಡ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

ಪೇಜಾವರ ಶ್ರೀಗಳ ಜೊತೆ ಬೆಂಗಳೂರಿನ ಉದ್ಯಮಿ ರಾಮ್ ಪ್ರಸಾದ್ , ವಾಸುದೇವ ಭಟ್ ಪೆರಂಪಳ್ಳಿ , ದೆಹಲಿ ಪೇಜಾವರ ಮಠದ ಮೆನೇಜರ್ ದೇವಿಪ್ರಸಾದ್ ಭಟ್ ಕೃಷ್ಣ ಭಟ್  ಉಪಸ್ಥಿತರಿದ್ದರು .

ದೇಶಾದ್ಯಂತ ಅನೇಕ ರಾಜ್ಯಗಳಿಂದ ನೂರಾರು ಸಾಧು ಸಂತರನ್ನು ಆಮಂತ್ರಿಸಲಾಗಿದ್ದು ಅವರ  ಆತಿಥ್ಯಕ್ಕಾಗಿ   ಹಿರಿಯ ಅಧಿಕಾರಿಗಳಾದ ಅವನೀಶ್ ಅವಸ್ಥಿ ,ಆರ್ ಪಿ‌ ಸಿಂಗ್ , ಅಶೋಕ್ ತಿವಾರಿ  , ಆರ್ ಬಿ ಎಸ್ ರಾವತ್ ಮೊದಲಾದವರ ನೇತೃತ್ವದಲ್ಲಿ ಪ್ರತ್ಯೇಕ ತಂಡ  ರಚಿಸಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಮಾರಂಭದಲ್ಲೂ ಮಠಾಧೀಶರು, ಸ್ವಾಮೀಜಿಗಳಿಗೆ ಪ್ರತ್ಯೇಕ  ಆಸನ ವ್ಯವಸ್ಥೆಗೊಳಿಸಲಾಗಿತ್ತು .  

 ಶ್ರೀಗಳಿಗೂ ತಟ್ಟಿದ ಟ್ರಾಫಿಕ್ ಜಾಮ್ ಬಿಸಿ: ಲಕ್ನೋದಲ್ಲಿ ಶುಕ್ರವಾರ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು .ಲಕ್ಷಾಂತರ ಜನ ಸಮಾರಂಭಕ್ಕೆ ಆಗಮಿಸಿದ್ದರಿಂದ ಮತ್ತು ಮೋದಿ ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರ ದಂಡೇ ಆಗಮಿಸಿದ್ದರಿಂದ ಅವರ ಬೆಂಗಾವಲು ವಾಹನಗಳ ಸರತಿ ಸಾಲೇ  ಪ್ರಮುಖ ರಸ್ತೆಗಳಲ್ಲಿ  ಸೇರಿದ್ದರಿಂದ ಉಂಟಾದ ಟ್ರಾಫಿಕ್ ಜಾಮ್ ನಲ್ಲಿ ಅನೇಕರು ಸಿಲುಕಿದರು. ಸ್ವತಃ ಪೇಜಾವರ ಶ್ರೀಗಳ ವಾಹನವೂ  ಸರತಿಯಲ್ಲಿ ಮುಂದೆ ಹೋಗದ ಪರಿಸ್ಥಿತಿ ಎದುರಾದಾಗ ಶ್ರೀಗಳು ವಾಹನದಿಂದ ಇಳಿದು ಸುಮಾರು ಎರಡು ಕಿ ಮೀ ನಡೆದೇ ಸ್ಟೇಡಿಯಂ ತಲುಪಿದರು .‌         

- Advertisement -
spot_img

Latest News

error: Content is protected !!