Tuesday, May 14, 2024
Homeಅಪರಾಧಚಿತ್ರದುರ್ಗ: ಆಸ್ತಿಗಾಗಿ ರೈತ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಚಿತ್ರದುರ್ಗ: ಆಸ್ತಿಗಾಗಿ ರೈತ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

spot_img
- Advertisement -
- Advertisement -

ಚಿತ್ರದುರ್ಗ: ತಾಲೂಕಿನ ಕೆಳಗಳ ಹಟ್ಟಿಯಲ್ಲಿ ರೈತ ಮಹಿಳೆಯನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.


ಹೌದು ಕೊಲೆಯಾದವರು ಭಾಗ್ಯಮ್ಮ(55) ಎನ್ನುವವರು ಭಾಗ್ಯಮ್ಮ ಅವರು ಮಂಗಳವಾರ ಬೆಳಿಗ್ಗೆ ಸೇವಂತಿ ಬೆಳೆಗೆ ನೀರು ಹಾಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಕೆಲವರು ಕೊಚ್ಚಿ ಕೊಲೆ ಮಾಡಿದ್ದಾರೆ.


ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಜಮೀನು ಅಳತೆ ವಿಚಾರದಲ್ಲಿ ಪಕ್ಕದ ಜಮೀನಿನ ಮಾಲೀಕರೊಂದಿಗೆ ಗಲಾಟೆ ನಡೆದಿತ್ತು. ಈ ಕುರಿತು ಗ್ರಾಮದಲ್ಲಿ ರಾಜಿ ಪಂಚಾಯಿತಿಗಳು ನಡೆದಿದ್ದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!