ಬಂಟ್ವಾಳ: ಪರಂಗಿಪೇಟೆಯ ಸೇವಾಂಜಲಿ ಪ್ರತಿಷ್ಟಾಪನ ಸಭಾಭವನದಲ್ಲಿ ಶಾಸಕ ಯು.ಟಿ.ಖಾದರ್ ಅವರು ತಮ್ಮ ವೈಯಕ್ತಿಕ ನೆಲೆಯಲ್ಲಿ ತುಂಬೆ, ಮೇರೆಮಜಲು, ಪುದು ಮತ್ತು ಕಳ್ಳಿಗೆ ಕ್ಲಸ್ಟರ್ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಹಾಗೂ ಅಕ್ಷರ ದಾಸೋಹದ ಅಡುಗೆ ಕೆಲಸಗಾರರಿಗೆ ಕಿಟ್ ವಿತರಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಮಾಜಿ ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ , ಕೊರೊನಾ ಸಂಕಷ್ಟದ ಅವಧಿಯಲ್ಲಿ ಸಮಾಜದ ಎಲ್ಲಾ ವರ್ಗದ ಜನರಿಗೆ ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ವೈಯಕ್ತಿಕ ನೆಲೆಯಲ್ಲಿ ಕಿಟ್ ವಿತರಿಸಿದ್ದಾರೆ . ಸಂಕಷ್ಟದ ಅವಧಿಯಲ್ಲಿ ಯಾರಿಗೂ ತೊಂದರೆ ಯಾಗಬಾರದು ಎಂಬುದೇ ಅವರ ಉದ್ದೇವಾಗಿದೆ ಎಂದರು.
ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅಧ್ಯಕ್ಷ ತೆ ವಹಸಿದ್ದರು.
ಈ ಸಂದರ್ಭದಲ್ಲಿ ಸೇವಾಂಜಲಿ ಟ್ರಸ್ಟ್ ನ ಸಂಚಾಲಕ ಕೃಷ್ಣ ಕುಮಾರ್ ಪೂಂಜಾ, ಉದ್ಯಮಿ ಮಹಾಬಲ ರೈ, ಗ್ರಾ.ಪಂ ಸದಸ್ಯ ಭಾಸ್ಕರ್ ರೈ, ಮೊಹಮ್ಮದ್ ಮೋನು ಫರಂಗಿಪೇಟೆ, ಫೈಝಲ್ ಅಮ್ಮೆಮ್ಮರ್, ಮೇರಮಜಲು ಗ್ರಾ. ಪಂ. ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ವೃಂದ ಪೂಜಾರಿ, ಮುಡಿಪು ಬ್ಲಾಕ್ ಅಧ್ಯಕ್ಷ ಇಮ್ತಿಯಾಜ್ ತುಂಬೆ, ಯುವ ಕಾಂಗ್ರೆಸ್ ಮುಖಂಡ ಮಜೀದ್ ಪೆರಿಮಾರ್, ಸಾಮಾಜಿಕ ಜಾಲತಾಣದ ಮುಖಂಡ ಸಮೀಜ್ ಫರಂಗಿಪೇಟೆ, ಇಸ್ಮಾಯಿಲ್ ಹತ್ತು ಮೈಲು, ಅಂಗನವಾಡಿ ಮೇಲ್ವಿಚಾರಕಿ ಸುಜಾತಾ , ಅಂಗವಾಡಿ ಕಾರ್ಯಕರ್ತರ ಅಧ್ಯಕ್ಷೆ ರವಿಕಲಾ , ಪಂಚಾಯತ್ ಸದಸ್ಯ ಇಕ್ಬಾಲ್ ಸುಜೀರ್ , ಅಷ್ವಧ್ ಫರಂಗಿಪೇಟೆ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ಧನ್ ಚೆಂಡ್ತಿಮಾರ್ ಉಪಸ್ಥಿತರಿದ್ದರು.