- Advertisement -
- Advertisement -
ಕಾಪು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕರಾವಳಿಯ ಇತಿಹಾಸ ಪ್ರಸಿದ್ಧ ಪಿಲಿಕೋಲ ದೈವ ನರ್ತಕ ದೈವನರ್ತಕ ಗುಡ್ಡ ಪಾಣಾರ ಅವರನ್ನ ಇಂದು ಸ್ವಗ್ರಾಮದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯ್ತು. ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮುಂಭಾಗದಲ್ಲಿ ಗ್ರಾಮಸ್ಥರು ವಿಜೃಂಭಣೆಯಿಂದ ಸ್ವಾಗತಿಸಿದರು.
ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಬೆಳಿಗ್ಗೆ ಬೆಂಗಳೂರಿನಿಂದ ಕಾಪು ತಾಲೂಕಿನ ಮೂಳೂರು ಸ್ವ ಗ್ರಾಮಕ್ಕೆ ಆಗಮಿಸಿದ ಗುಡ್ಡ ಪಾನರನ್ನು ಚಂಡೆ ವಾದನ ಹೂವಿನ ಮಾಲೆ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಗುಡ್ಡಪಾನರ ಅಭಿಮಾನಿಗಳು ಉಪಸ್ಥಿತರಿದ್ದರು.
- Advertisement -