- Advertisement -
- Advertisement -
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ರುದ್ರ ನರ್ತನ ಜೋರಾಗಿದೆ. ಕೊರೊನಾ ಹರಡುವಿಕೆಗೆ ಬ್ರೇಕ್ ಹಾಕೋದೇ ಜಿಲ್ಲಾಡಳಿತಕ್ಕೆ ಬಹು ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳೋದಕ್ಕೆ ಸಾಧ್ಯವೋ ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದೀಗ ಪಿಲಿಕುಳ ನಿಸರ್ಗಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೊರೊನಾ ಹಬ್ಬುವಿಕೆ ಜಾಸ್ತಿಯಾಗುತ್ತಿರೋ ಹಿನ್ನೆಲೆಯಲ್ಲಿ ಜುಲೈ 30ರವರೆಗೆ ಪಿಲಿಕುಳ ನಿಸರ್ಗಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಾಗೇನೇ ಮಂಗಳೂರಿನ ಟೀ ಪಾರ್ಕ್ ಪ್ರವೇಶಕ್ಕೂ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ
- Advertisement -