- Advertisement -
- Advertisement -
ಬಾಯ್ಕಾಟ್ ಬಾಲಿವುಡ್ ಎಂಬ ಟ್ರೆಂಡ್ ನಿಲ್ಲಿಸುವಂತ ಬಾಲಿವುಟ್ ನಟ ಸುನೀಲ್ ಶೆಟ್ಟಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಮನವಿ ಮಾಡಿದ್ದಾರೆ. ಸುನೀಲ್ ಶೆಟ್ಟಿ, ಜಾಕಿ ಶ್ರಾಫ್, ಸೋನು ನಿಗಮ್, ಕೈಲಾಶ್ ಖೇರ್ ಸೇರಿದಂತೆ ಅನೇಕರು ಯೋಗಿ ಆದಿತ್ಯನಾಥ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿದ್ದಾರೆ.
ಈ ವೇಳೆ ಹಲವು ಮಹತ್ವದ ವಿಚಾರಗಳು ಚರ್ಚೆ ಆಗಿವೆ. ಸುನೀಲ್ ಶೆಟ್ಟಿ ಅವರ ಮಾತು ಗಮನ ಸೆಳೆದಿದೆ. ‘ನಾವು ಒಳ್ಳೆಯ ಕೆಲಸ ಮಾಡುತ್ತಿದ್ದೇವೆ ಎಂಬ ಸತ್ಯವನ್ನು ಎಲ್ಲರಿಗೂ ತಿಳಿಸಬೇಕಿದೆ. ಕೆಲವರು ಕೆಟ್ಟವರು ಇರಬಹುದು. ಆದರೆ ಇಡೀ ಚಿತ್ರರಂಗ ಕೆಟ್ಟದ್ದಲ್ಲ. ನಾವು ಒಳ್ಳೆಯ ಸಿನಿಮಾ ಮಾಡಿದ್ದೇವೆ. ಎಲ್ಲರೂ ಜೊತೆಯಾಗಿ ಬಾಯ್ಕಾಟ್ ಬಾಲಿವುಡ್ ಎಂಬ ಟ್ರೆಂಡ್ ನಿಲ್ಲಿಸಬೇಕಿದೆ’ ಎಂದು ಸುನೀಲ್ ಶೆಟ್ಟಿ ಹೇಳಿದ್ದಾರೆ.
- Advertisement -