- Advertisement -
- Advertisement -
ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಇಂದು ಹಣ ಬಿಡುಗಡೆಯಾಗಿದೆ. ರಾಜ್ಯದ ರೈತರಿಗೆ 12ನೇ ಕಂತಿನ ಹಣ ಬಿಡುಗಡೆ ಮಾಡಲ್ಪಟ್ಟಿದ್ದು, ರಾಜ್ಯಕ್ಕೆ ಒಟ್ಟು 1007.26 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 50. 36 ಲಕ್ಷ ರೈತರ ಖಾತೆಗೆ ಹಣ ಬಿಡುಗಡೆಯಾಗಿದೆ. ಉಡುಪಿ ಜಿಲ್ಲೆಗೆ 28.17 ಕೋಟಿ ರೂಪಾಯಿ ಬಿಡುಗಡೆಯಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಗೆ 28 ಕೋಟಿ ರೂಪಾಯಿ ಬಿಡುಗಡೆ ಮಾಡಲ್ಪಟ್ಟಿದೆ.
12ನೇ ಕಂತು ಬಿಡುಗಡೆಯ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿದ ವಿಧಾನಸೌಧದಿಂದ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಪಾಲ್ಗೊಂಡಿದ್ದರು.
- Advertisement -