ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 96ನೇ ಜಯಂತಿ ಇಂದು. ಈ ಸಂದರ್ಭದಲ್ಲಿ ಹಲವು ನಾಯಕರು ಅವರನ್ನು ಸ್ಮರಿಸಿದ್ದಾರೆ.
ದೆಹಲಿಯಲ್ಲಿರುವ ಅಟಲ್ ಸಮಾದಿ ಸದೈವ್ ಅಟಲ್ ಬಳಿ ಬೆಳಗ್ಗೆಯೇ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಷ್ಪವಿರಿಸಿ ಗೌರವ ನಮನ ಸಲ್ಲಿಸಿದರು.
ಸದೈವ್ ಅಟಲ್ ಗೆ ತೆರಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಚಿವ ಪಿಯೂಷ್ ಗೋಯಲ್ ಹಲವು ಕೇಂದ್ರ ಸಚಿವರು ಅಗಲಿದ ನಾಯಕನನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. “ಅವರು ದೇಶವನ್ನು ಅಭೂತಪೂರ್ವ ಅಭಿವೃದ್ಧಿಯ ಎತ್ತರಕ್ಕೆ ಕೊಂಡೊಯ್ದರು. ಬಲವಾದ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳು ಯಾವತ್ತೂ ಮರೆಯುವ ಹಾಗಿಲ್ಲ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.