- Advertisement -
- Advertisement -
ಮಂಗಳೂರು: ಮೀನುಗಾರಿಕಾ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ನಿಗದಿಪಡಿಸಿರುವ ಗುರಿ, ಸಾಧನೆ ಮತ್ತು ಇಲಾಖೆಯ ಇತರೇ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆ ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಕೇಂದ್ರ ಕಚೇರಿ ಉಪನಿರ್ದೇಶಕ ರೇಣುಕಾಮೂರ್ತಿ ಎಸ್.ಜಿ. ಪ್ರಗತಿ ಪರಿಶೀಲನೆ ನಡೆಸಿದರು.
ಮಂಗಳೂರಿನ ಮೀನುಗಾರಿಕೆ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ದಕ್ಷಿಣ ಕನ್ನಡ ವಲಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಉಪ ನಿರ್ದೇಶಕಿ ಶ್ರೀಮತಿ ಸುಶ್ಮಿತಾ ರಾವ್, ಸಹಾಯಕ ನಿರ್ದೇಶಕ ದಿಲೀಪ್ ಕುಮಾರ್ ಹಾಗೂ ಇತರೇ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -