- Advertisement -
- Advertisement -
ಮಂಗಳೂರು : ಇಲ್ಲಿನ ಹಂಪನಕಟ್ಟೆಯ ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿಯೊಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿದಂತೆ ಪೊಲೀಸರು ಹಂತಕನ ಇನ್ನಷ್ಟು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.
ಕೊಲೆಗಾರ ಚಲನವಲನ ಸಿಸಿಟಿವಿಗಳಲ್ಲಿ ದಾಖಲಾಗಿದ್ದು, ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳ ಮೊಬೈಲ್ ಫೋನ್ ಸಂಖ್ಯೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು’ ಎಂದು ನಗರ ಪೊಲೀಸರು ತಿಳಿಸಿದ್ದಾರೆ.
ಮಾಹಿತಿದಾರರು ಈ ಕೆಳಗಿನ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ:
ಎಸಿಪಿ ಸಿಸಿಬಿ, ಮಂಗಳೂರು ನಗರ – ಪಿ ಎ ಹೆಗ್ಡೆ (9945054333)
ಎಸಿಪಿ ಕೇಂದ್ರ ಉಪ ವಿಭಾಗ, ಮಂಗಳೂರು ನಗರ, ಮಹೇಶ್ ಕುಮಾರ್ – (9480805320)
- Advertisement -