- Advertisement -
- Advertisement -
ಉಡುಪಿ; ಒಂದೂವರೆ ವರ್ಷದ ಹಿಂದೆ ಅಂತ್ಯಕ್ರಿಯೆ ಮಾಡಿದ ಮೃತದೇಹವನ್ನು ಮರುಪರಿಶೀಲನೆಗಾಗಿ ಪೊಲೀಸರು ಹೊರ ತೆಗೆದ ಘಟನೆ ಉಡುಪಿಯ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ನಡೆದಿದೆ.
ಪಂಜಾಬ್ ನಲ್ಲಿ ನಾಪತ್ತೆಯಾದ ಈ ವ್ಯಕ್ತಿ ಒಂದೂವರೆ ವರ್ಷಗಳ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದರು. ಆದರೆ ವಾರಸುದಾರರು ಸಂಪರ್ಕಿಸದ ಹಿನ್ನೆಲೆ ಅಜ್ಜರಕಾಡು ಶವಾಗಾರದಲ್ಲಿದ್ದ ಮೃತದೇಹವನ್ನು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿತ್ತು.
ಈ ಕುರಿತು ಮಾಹಿತಿ ಪಡೆದುಕೊಂಡ ಪಂಜಾಬ್ ಪೊಲೀಸರು, ಮಲ್ಪೆಗೆ ಆಗಮಿಸಿ ಹೆಚ್ಚಿನ ತನಿಖೆಗಾಗಿ ಮೃತದೇಹವನ್ನು ಹೊರ ತೆಗೆಯುವಂತೆ ಸಂಬಂಧಪಟ್ಟವರಿಗೆ ಲಿಖಿತವಾಗಿ ಮನವಿ ಮಾಡಿಕೊಂಡಿದ್ದಾರೆ.
ಅದರಂತೆ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಮೃತದೇಹ ಹೊರತೆಗೆಯಲಾಗಿದೆ.
- Advertisement -