Saturday, April 27, 2024
Homeಕರಾವಳಿಆಜಾನ್ ಗೆ ಸೆಡ್ಡು ಹೊಡೆಯಲು ಕೊರಗಜ್ಜನ ಭಕ್ತಿಗೀತೆ ಹಾಕಿದ ಪ್ರಕರಣ:  ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ...

ಆಜಾನ್ ಗೆ ಸೆಡ್ಡು ಹೊಡೆಯಲು ಕೊರಗಜ್ಜನ ಭಕ್ತಿಗೀತೆ ಹಾಕಿದ ಪ್ರಕರಣ:  ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಕಮೀಷನರ್ 

spot_img
- Advertisement -
- Advertisement -
ಮಂಗಳೂರು: ಇಲ್ಲಿನ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದದಲ್ಲಿ ಮೈಕ್ ಅಳವಡಿಸಿ ,ಆಜಾನ್ ಗೆ ಸೆಡ್ಡು ಹೊಡೆಯಲು ಬೆಳಗ್ಗೆ 5 ಗಂಟೆಯಿಂದ 6 ಗಂಟೆಯ ವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಎಸ್ ಶಶಿಕುಮಾರ್ ಹೇಳಿದ್ದಾರೆ. ಅಲ್ಲದೇ ಇಂತಹ ಘಟನೆಗಳು ಗಮನಕ್ಕೆ ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

- Advertisement -
spot_img

Latest News

error: Content is protected !!