- Advertisement -
- Advertisement -
ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೆ ನಿನ್ನೆ ಸುರತ್ಕಲ್ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ.
ಕೊಲೆ ನಡೆದಿರುವುದರಿಂದ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಮತ್ತು ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಯ ಪ್ರಮುಖರು ಎಚ್ಚರದಿಂದಿರುವಂತೆ ಮತ್ತು ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ನೀಡಲಾಗಿದೆ.
- Advertisement -