Thursday, May 2, 2024
Homeಕರಾವಳಿಮಂಗಳೂರು ಹೊರವಲಯದಲ್ಲಿ ಅಕ್ರಮ ಮರಳು ದಾಸ್ತಾನು ಸ್ಥಳಕ್ಕೆ ಪೊಲೀಸ್ ದಾಳಿ

ಮಂಗಳೂರು ಹೊರವಲಯದಲ್ಲಿ ಅಕ್ರಮ ಮರಳು ದಾಸ್ತಾನು ಸ್ಥಳಕ್ಕೆ ಪೊಲೀಸ್ ದಾಳಿ

spot_img
- Advertisement -
- Advertisement -

ಮಂಗಳೂರು: ಅಕ್ರಮ ಮರಳು ದಾಸ್ತಾನು ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ.ಎರಡು ಪ್ರತ್ಯೇಕ ಪ್ರಕರಣದಲ್ಲಿ‌ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಒಟ್ಟು 250 ಲೋಡ್ ಮರಳನ್ನು ಸುರತ್ಕಲ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುರತ್ಕಲ್ ಠಾಣೆ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಸುರತ್ಕಲ್ ನ ಮುಂಚೂರು ಗ್ರಾಮದಲ್ಲಿ 100 ಲೋಡ್ ಮತ್ತು ಚೇಳ್ಯಾರು ಗ್ರಾಮದಲ್ಲಿ 150 ಲೋಡ್ ಮರಳು ವಶಪಡಿಸಿಕೊಳ್ಳಲಾಗಿದೆ.

ಮಳೆಗಾಲದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಅಕ್ರಮವಾಗಿ ಮರಳು ಸಂಗ್ರಹ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಎಂಎಂಆರ್ ಡಿ ಕಾಯ್ದೆಯಡಿ ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಪ್ರಕರಣ ಹಸ್ತಾಂತರ ಮಾಡಲಾಗಿದೆ.

ಮರಳು ಸಂಗ್ರಹಿಸಿದ್ದ ಭೂ ಮಾಲೀಕರ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

- Advertisement -
spot_img

Latest News

error: Content is protected !!