- Advertisement -
- Advertisement -
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ನಿಷೇಧವಿದ್ದರೂ ಬೆಂಗಳೂರಿನಿಂದ ಕೆಎಸ್ ಆರ್ ಟಿಸಿ ಬಸ್ ವೊಂದು ಆಗಮಿಸಿತ್ತು. ಈ ಬಸ್ಸನ್ನು ಕೊಕ್ಕಡದಲ್ಲಿ ಪೊಲೀಸರು ತಡೆದ ಘಟನೆ ನಡೆದಿದೆ ಅಲ್ಲದೇ ಬಸ್ ನ್ನು ವಾಪಾಸ್ ಬೆಂಗಳೂರಿಗೆ ಕಳುಹಿಸಿದ್ದಾರೆ.
ಬಸ್ ನಲ್ಲಿ ಮಹಿಳೆಯರು-ಮಕ್ಕಳು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು ಎನ್ನಲಾಗಿದೆ. ದಕ್ಷಿಣಕನ್ನಡ ಜಿಲ್ಲೆಗೆ ಪ್ರವೇಶ ನಿಷೇಧವಿದ್ದರೂ ಕೆ ಎಸ್ ಆರ್ ಟಿ ಸಿ ಬಸ್ ಹೊರಡಿಸಿತ್ತು. ಬಳಿಕ ಬಸ್ ನಲ್ಲಿದ್ದ ಪ್ರಯಾಣಿಕರು ವಾಪಾಸ್ ತೆರಳಿದರು ಎನ್ನಲಾಗಿದೆ.
- Advertisement -