- Advertisement -
- Advertisement -
ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದದ್ದು ಮಾತ್ರವಲ್ಲದೇ ಅವರಿಂದ ಹಣ ಪಡೆದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಆ ಆರು ಮಂದಿ ಪೊಲೀಸರು ವರ್ಗಾವಣೆ ಮಾಡಲಾಗಿದೆ.
ಎಎಸ್ಐ ಡಿಜೆ ಶಿವಪುರ, ಎಎಸ್ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ಎಂಬವರನ್ನು ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಈ ಆರು ಜನ ಪೊಲೀಸರು ದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ವಿವಾದಕ್ಕೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ಆರು ಜನ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.
- Advertisement -