Monday, May 6, 2024
Homeಕರಾವಳಿಉಡುಪಿಉಡುಪಿ : ಕೇರಳದಲ್ಲಿ ಸೆರೆಸಿಕ್ಕ ನಕ್ಸಲ್ ನಾಯಕಿಯನ್ನು ಕಾರ್ಕಳಕ್ಕೆ ಕರೆತಂದ ಪೊಲೀಸರು

ಉಡುಪಿ : ಕೇರಳದಲ್ಲಿ ಸೆರೆಸಿಕ್ಕ ನಕ್ಸಲ್ ನಾಯಕಿಯನ್ನು ಕಾರ್ಕಳಕ್ಕೆ ಕರೆತಂದ ಪೊಲೀಸರು

spot_img
- Advertisement -
- Advertisement -

ಉಡುಪಿ : ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ@ಉಣ್ಣಿಮಾಯಾ(28) ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದು. ನಂತರ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳು.

ಕಾರ್ಕಳದಲ್ಲಿ 19-11-2011 ರಲ್ಲಿ ನಡೆದಿದ್ದ ನಕ್ಸಲ್ ದಾಳಿಯ ಪ್ರಕರಣದಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಕಳ ಕೋರ್ಟ್ ನಿಂದ ಬಾಡಿ ವಾರಂಟ್ ಪಡೆದು ಫೆ.14 ರಂದು ರಾತ್ರಿ ಕೇರಳ ಜೈಲಿನಿಂದ ಕಾರ್ಕಳ ನಗರ ಪೊಲೀಸ್ ಠಾಣೆಗೆ ಬಿಗಿ ಭದ್ರತೆಯಲ್ಲಿ ಕರೆತಂದು ಲಾಕಪ್ ನಲ್ಲಿ ಇರಿಸಿದ್ದರು.

ಫೆ.15 ರಂದು ಕಾರ್ಕಳ ನಗರ ಪೊಲೀಸರು ಪ್ರಕರಣ ನಡೆದ ಕಬ್ಬಿನಾಲೆ ಗೆ ನಕ್ಸಲ್ ನಾಯಕಿ ಶ್ರೀಮತಿಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ನಂತರ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

- Advertisement -
spot_img

Latest News

error: Content is protected !!