- Advertisement -
- Advertisement -
ಪುತ್ತೂರು : ಕೇಂದ್ರ ಸರಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ಕೇಂದ್ರ ಅಂಚೆ ನೌಕರರು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ.
ಮುಷ್ಕರದ ಹಿನ್ನಲೆಯಲ್ಲಿ ಪುತ್ತೂರು ಕೇಂದ್ರ ಅಂಚೆ ಕಛೇರಿ ಮುಂಭಾಗದಲ್ಲಿ ಅಂಚೆ ನೌಕರರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಕೇಂದ್ರ ಸರಕಾರ ಖಾಸಗೀಕರಣ ನೀತಿಯನ್ನು ತಕ್ಷಣವೇ ಕೈ ಬಿಡಬೇಕೆಂದು ಒತ್ತಾಯಿಸಿದರು. ಅಲ್ಲದೆ ಗ್ರಾಮೀಣ ಅಂಚೆ ನೌಕರರಿಗೆ 7 ನೇ ವೇತನ ಆಯೋಗ ಜಾರಿಗೊಳಿಸಬೇಕು. ಗ್ರಾಮೀಣ ಅಂಚೆ ನೌಕರರಿಗೆ ಪಿಂಚಣಿ ಸೇರಿದಂತೆ ಎಲ್ಲಾ ಸರಕಾರಿ ಸೌಲಭ್ಯಗಳನ್ನು ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
- Advertisement -