ಮೈಸೂರು : ಇಂಧನ ಸಚಿವ ಸುನೀಲ್ ಕುಮಾರ್ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇನ್ಮೇಲೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದಿದ್ದಾರೆ.
ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ ಐಪಿ ಸೆಕ್ಟರ್ಗಳಿಗೆ ವಿದ್ಯುತ್ ಸಂಪರ್ಕ ನೀಡುವುದರ ಕುರಿತು ಚರ್ಚಿಸಲಾಗಿದೆ ಎಂದರು.
ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಣೆ ಮಾಡಬೇಕು. ಹಾಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ , ರಾಜ್ಯದಲ್ಲಿ ವಿದ್ಯುತ್ ದರ ಬಗ್ಗೆ ಒಂದು ಸಲ ಹೆಚ್ಚಾದ್ದಾರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ನಮ್ಮ ಸರ್ಕಾರ ಬಂದ ಮೇಲೆ ಅಥವಾ ನಾನು ಸಚಿವನಾದ ಮೇಲೆ ದರ ಪರಿಷ್ಕರಣೆ ನೀತಿ ಜಾರಿಗೆ ಬಂದಿಲ್ಲ. ಕಳೆದ 7 ವರ್ಷಗಳಿಂದ ಈ ಇಂತಹ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದರು.