Sunday, June 29, 2025
Homeಕರಾವಳಿಉಡುಪಿಉಡುಪಿ; ನಿಜವಾಯ್ತು ದೈವದ ನುಡಿ; ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ...

ಉಡುಪಿ; ನಿಜವಾಯ್ತು ದೈವದ ನುಡಿ; ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು

spot_img
- Advertisement -
- Advertisement -

ಉಡುಪಿ;  ಕರಾವಳಿಯ ದೈವಗಳ ಕಾರ್ಣಿಕ ಎಂಥಹದ್ದು ಅನ್ನೋದು ಎಲ್ಲರಿಗೂ ಗೊತ್ತೆ ಇದೆ. ಇದೀಗ ದೈವ ನುಡಿದಂತೆ ಘಟನೆಯೊಂದು ನಡೆದಿದೆ.

ಕಳೆದ ವರ್ಷ ಅಂದರೆ 2023  ಫೆ. 5ರಂದು ಪಾಂಗಾಳದಲ್ಲಿ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಅವರನ್ನು ಡ್ರ್ಯಾಗನ್ ನಿಂದ ಇರಿದು ಕೊಲೆ ಮಾಡಲಾಗಿತ್ತು. ಶರತ್‌ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು.ಆಗ ದೈವ “ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ” ಎಂದು ಮನೆಯವರಿಗೆ ಅಭಯ ನೀಡಿತ್ತು.  ಇದೀಗ ವರ್ಷದ ಹಿಂದೆ ದೈವ ನುಡಿದ ಕಾರ್ಣಿಕದ ನುಡಿ ನಿಜವಾಗಿದೆ.ಅದರಂತೆಯೇ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯ ಮೇ 23ರಂದು ತಾನಾಗಿಯೇ ನ್ಯಾಯಾಲಯದ ಮುಂದೆ ಹಾಜರಾಗಿದ್ದಾನೆ.

ಇದೀಗ  ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ ಆಚಾರ್ಯನನ್ನು ಮೇ 30ರ ವರೆಗೆ ಕಾಪು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ಯೋಗೀಶ್‌ ಆಚಾರ್ಯ ಮೇ 23ರಂದು ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆಗಾಗಿ ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!