Wednesday, May 8, 2024
Homeತಾಜಾ ಸುದ್ದಿದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್‌ ವ್ಯತ್ಯಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್‌ ವ್ಯತ್ಯಯ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಆ.೧೯) ಮತ್ತು ನಾಳೆ(ಆ.೨೦) ವಿದ್ಯುತ್‌ ವ್ಯತ್ಯಯವಿರಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

33/11ಕೆ.ವಿ. ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‌ ಗಳಲ್ಲಿ ಜಂಪ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಆ.19ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮೈದಾನ್ 3ನೇ ಕ್ರಾಸ್, 4ನೇ ಕ್ರಾಸ್, ಬೀಬಿ ಅಲಾಬಿ ರಸ್ತೆ, ರಾವ್ ಅಂಡ್ ರಾವ್ ಸರ್ಕಲ್, ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗ, ಜಿ.ಎಚ್.ಎಸ್ ರಸ್ತೆ ಪಿ.ಎಮ್ ರಾವ್ ರೋಡ್, ಗೌರಿಮಠ ರಸ್ತೆ, ರಾಘವೇಂದ್ರ ಮಠ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ.

ಅತ್ತಾವರ

33/11ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿಶ್ವಭವನ ಫೀಡರಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಆ.20ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕೆ.ಎಸ್. ರಾವ್ ರೋಡ್, ಓಲ್ಡ್ ಬಸ್‌ಸ್ಟ್ಯಾಂಡ್, ಹಂಪನಕಟ್ಟೆ, ಶರವು ಟೆಂಪಲ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.‌

ಮೂಡಬಿದ್ರೆ

110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‌ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಆ.20ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!