Thursday, June 4, 2026
Homeಕರಾವಳಿಬೆಳ್ತಂಗಡಿ : ವಿದ್ಯುತ್ ಗೆ ಏಣಿ ತಾಗಿ ವ್ಯಕ್ತಿ ಸಾವು:ವರ್ಷಗಳಿಂದ ವಿದ್ಯುತ್ ಲೈ‌ನ್ ಬದಲಿಸಲು ಮನವಿ...

ಬೆಳ್ತಂಗಡಿ : ವಿದ್ಯುತ್ ಗೆ ಏಣಿ ತಾಗಿ ವ್ಯಕ್ತಿ ಸಾವು:ವರ್ಷಗಳಿಂದ ವಿದ್ಯುತ್ ಲೈ‌ನ್ ಬದಲಿಸಲು ಮನವಿ ಮಾಡಿದ್ದ ಸ್ಥಳೀಯರು:ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ  ಸ್ಥಳೀಯರು

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ  ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ,  ವಿದ್ಯುತ್‌ ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ  ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

 ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46)  ಮೃತ ದುರ್ದೈವಿ. ಬಾಲಕೃಷ್ಣ ಶೆಟ್ಟಿ ಇಂದು ಬೆಳಿಗ್ಗೆ ಸ್ಥಳೀಯ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದು  ಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ ಶಾಕ್ ತಗಲಿದೆ. ಪರಿಣಾಮ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಅವರನ್ನು. ಕೂಡಲೇ  ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತಂದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್ ಲೈನ್ ಸಮಸ್ಯೆ: ಕಳೆದ ಐದು ,ಆರು ವರ್ಷಗಳಿಂದ ತೋಟದ ಮಧ್ಯೆ ಹಾದು ಹೋಗಿರುವ ವಿದ್ಯುತ್ ಲೈನ್ ಬದಲಾಯಿಸಲು ಮೆಸ್ಕಾಂ , ಡಿಸಿಗೆ ಮನವಿ ಮಾಡಿದ್ದರು. ಇಲ್ಲಿವರೆಗೂ ಮೆಸ್ಕಾಂ ಇಲಾಖೆ ಇದರ ಬಗ್ಗೆ ಗಮನಹರಿಸಿಲ್ಲ. ಅದಲ್ಲದೆ ವಿದ್ಯುತ್ ಲೈನ್ ಹಾದುಹೋಗಿರುವ ತೆಂಗಿನ ಮರ , ಅಡಿಕೆ ಮರ ಸುಟ್ಟ ಹೋಗುತ್ತಿದೆ‌. ಇಲ್ಲಿಗೆ ಯಾವ ಮೆಸ್ಕಾಂ ಸಿಬ್ಬಂದಿ ಮರದ ರೆಂಬೆ ಕಡಿಯಲು ಬರುವುದಿಲ್ಲ ಎಲ್ಲವನ್ನೂ ನಾವು ಸರಿಪಡಿಸಬೇಕಾದ ಪರಿಸ್ಥಿತಿ ಇದೆ‌‌‌. ಹಲವು ಮಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ಮೆಸ್ಕಾಂ ವಿರುದ್ದ ಊರವರು ಮಾಧ್ಯಮ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -

Latest News

error: Content is protected !!