- Advertisement -
- Advertisement -
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಮಾತಿನ ಮಲ್ಲ ಪ್ರದೀಪ್ ಈಶ್ವರ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್, ಕಾಂಗ್ರೆಸ್ಗಿಂತ 1 ಮತಕ್ಕಿಂತ ಹೆಚ್ಚು ಪಡೆದುಕೊಂಡರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಅಲ್ಲದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆಂದು ಎಂದು ಸವಾಲು ಹಾಕಿದ್ದರು.

ಇದೀಗ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ 21 ಸಾವಿರ ಮತಗಳು ಲೀಡ್ ಪಡೆದುಕೊಂಡ ಬೆನ್ನಲ್ಲೇ ಪ್ರದೀಪ್ ಈಶ್ವರ್ ರಾಜೀನಾಮೆ ಯಾವಾಗ ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಇದರ ಮಧ್ಯೆ ಇದೀಗ ಪ್ರದೀಶ್ ಈಶ್ವರ್ ಅವರ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ರಾಜೀನಾಮೆ ಪತ್ರ ವೈರಲ್ ಆದ ಬೆನ್ನಲ್ಲೇ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದು ಇದು ಫೇಕ್ ಲೆಟರ್ ನಾನು ರಾಜೀನಾಮೆ ಕೊಟ್ಟಿಲ್ಲ ಎಂದಿದ್ದಾರೆ.
- Advertisement -