- Advertisement -
- Advertisement -
ಪ್ರದೀಪ್ ಆತ್ಮಹತ್ಯೆ ಪ್ರಕರಣ ಸಂಬಂಧ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಂದು ಪ್ರದೀಪ್ ಅವರ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಲಿಂಬಾವಳಿ ವಿರುದ್ಧವೂ ಎಫ್ ಐ ಆರ್ ಆಗಿರುವುದರಿಂದ ಅವರು ಶಾಸಕ ಎಂಬ ಅಂಶವನ್ನು ಬದಿಗೊತ್ತಿ, ಪೊಲೀಸರು ಬಂಧಿಸಿ ವಿಚಾರಣೆ ನಡೆಸಬೇಕು ಮತ್ತು ಪ್ರದೀಪ್ ಅವರ ಪತ್ನಿಗೆ ಹಣ ವಾಪಸ್ಸು ಕೊಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
- Advertisement -