- Advertisement -
- Advertisement -
ಕುಂದಾಪುರ: ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಪತ್ನಿಗೆ ಪುತ್ತೂರಿನಲ್ಲಿಯೇ ನೌಕರಿ ನೀಡಿದರೆ ಉತ್ತಮ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕುಂದಾಪುರದಲ್ಲಿ ಇಂದು ಮಾತನಾಡಿದ ಮುತಾಲಿಕ್, ಸಿಎಂ ಕೊಟ್ಟಿದ್ದ ಹೇಳಿಕೆಯನ್ನು ಪೂರ್ಣಗೊಳಿಸಿದ್ದು, ಗುತ್ತಿಗೆ ಆಧಾರದ ಮೇರೆಗೆ ಕೆಲಸ ನೀಡುವ ಹೇಳಿಕೆಯನ್ನ ದೃಢಪಡಿಸಿದ್ದಾರೆ, ಆದರೆ ಸಮೀಪದಲ್ಲಿಯೇ ಪುತ್ತೂರಿನಲ್ಲಿ ಕೆಲಸ ನೀಡಿದರೆ ಉತ್ತಮ ಎಂದು ಹೇಳಿದ್ದಾರೆ.
ಸಿಎಂ ನೀಡಿರುವ ನೌಕರಿ ಗುತ್ತಿಗೆ ಆಧಾರದ ಮೇಲೆ ಇದೆ, ಇಲ್ಲಿ ಉದ್ಯೋಗ ಭದ್ರತೆ ಇಲ್ಲ, ಅಸುರಕ್ಷತೆ ಅಭದ್ರತೆ ಕಾಡದ ಹಾಗೆ ಖಾಯಂ ನೌಕರಿ ನೀಡುವ ಕೆಲಸವಾಗಬೇಕಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಅಲ್ಲದೇ, ಈ ವಿಚಾರವಾಗಿ ನಾನು ಸರಕಾರಕ್ಕೆ ಒತ್ತಾಯ ಮಾಡುತ್ತೇನೆ ಹಾಗೂ ಆಗ್ರಹಿಸುತ್ತೇನೆ ಎಂದೂ ಮುತಾಲಿಕ್ ಹೇಳಿದ್ದಾರೆ.
- Advertisement -