Tuesday, May 7, 2024
Homeತಾಜಾ ಸುದ್ದಿಮಂಗಳೂರಿಗೆ ಪ್ರಮೋದ್‌ ಮುತಾಲಿಕ್‌ ಆಗಮನ: ನಿರ್ಬಂಧ ವಿಧಿಸಿದ್ರೂ ಕ್ಯಾರೇ ಎನ್ನದೇ ಬಂದ ಮುತಾಲಿಕ್:‌ ಪೊಲೀಸರು ವಶಕ್ಕೆ...

ಮಂಗಳೂರಿಗೆ ಪ್ರಮೋದ್‌ ಮುತಾಲಿಕ್‌ ಆಗಮನ: ನಿರ್ಬಂಧ ವಿಧಿಸಿದ್ರೂ ಕ್ಯಾರೇ ಎನ್ನದೇ ಬಂದ ಮುತಾಲಿಕ್:‌ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ರೂ  ಮುತಾಲಿಕ್ ಮಂಗಳೂರಿಗೆ ಆಗಮಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರವೇಶಕ್ಕೆ ಜು.28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿ ಇರುವುದಾಗಿ ಜಿಲ್ಲಾಧಿಕಾರಿ ಆದೇಶಿಸಿದ್ದರು.

ಆದ್ರೂ ಮುತಾಲಿಕ್‌ ಮಂಗಳೂರಿಗೆ ಆಗಮಿಸಿದ್ದು, ಪ್ರವೀಣ್‌ ನೆಟ್ಟಾರು ಮನೆಗೆ ಹೋಗುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಇದೆ. ಹಾಗಾಗಿ ಅವರನ್ನ ಪೊಲೀಸರು ತಡೆಯಬಹುದು ಎಂಬ ಮಾಹಿತಿಯೂ ಇದೆ.  

- Advertisement -
spot_img

Latest News

error: Content is protected !!