Sunday, June 29, 2025
Homeತಾಜಾ ಸುದ್ದಿ"ಬಾಬ್ರಿ ಮಸೀದಿ ತೀರ್ಪು: ಕರಸೇವಕರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು.?"

“ಬಾಬ್ರಿ ಮಸೀದಿ ತೀರ್ಪು: ಕರಸೇವಕರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು.?”

spot_img
- Advertisement -
- Advertisement -

ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದ ಬೆನ್ನಲ್ಲೇ ಇದೀಗ ಟ್ವೀಟ್ ಮಾಡಿರುವ ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್, ಕರಸೇವಕರ ಮೇಲೆ ಗುಂಡಿನ ದಾಳಿ ನಡೆದಾಗ ನ್ಯಾಯ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿ, ಸಿಬಿಐ ವಿಶೆಷ ಕೋರ್ಟ್ ನಿನ್ನೆ ತೀರ್ಪು ಪ್ರಕಟಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ನಟಿ ಪ್ರಣೀತಾ, ರಾಜಕೀಯ ನಾಯಕರನ್ನು ಬಂಧಿಸುವಾಗ ಕಾನೂನಿನ ನಿಯಮವಿರಲಿಲ್ಲವೇ? ಪೊಲೀಸರು ಕರಸೇವಕರ ಮೇಲೆ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು? ಎಂದು ಪ್ರಶ್ನಿಸಿದ್ದಾರೆ.

ಪ್ರಣೀತಾ ಅವರ ಈ ಟ್ವೀಟ್​ಗೆ ಪರ-ವಿರೋಧದ ಚರ್ಚೆಯಾಗುತ್ತಿದೆ. ಪ್ರಣೀತಾ ಯಾವಾಗ ರಾಜಕೀಯ ಸೇರಿದರು ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಪ್ರಣೀತಾ ಮಾತುಗಳನ್ನು ಅನುಮೋದಿಸಿದ್ದಾರೆ.

- Advertisement -
spot_img

Latest News

error: Content is protected !!