- Advertisement -
- Advertisement -
ಮಂಡ್ಯ:ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು ಪ್ರತಾಪ್ ಸಿಂಹ ಮಾತುಗಳು ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ಅಧಿಕಾರಿ ಜತೆ ಫೋನ್ನಲ್ಲಿ ಮಾತನಾಡುವಾಗ ಈ ಪ್ರಸಂಗ ಜರುಗಿದೆ.ಸಂಸದೆ ಸುಮಲತಾ ಅಂಬರೀಷ್ ನಡೆಯನ್ನು ಟೀಕಿಸಿ ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದಾರೆ.
ಬೆಂಗಳೂರು-ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜತೆ ಫೋನ್ನಲ್ಲಿ ಮಾತನಾಡುವ ವೇಳೆ ಸುಮಲತಾ ವಿರುದ್ಧ ಅಧಿಕಾರಿ ದೂರು ಹೇಳಿದಾಗ ಅವರ ವಿರುದ್ಧ ಪ್ರತಾಪ್ ಸಿಂಹ ಮಾತನಾಡಿದ್ದಾರೆ.”ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರಷ್ಟೇ. ಮಂಡ್ಯದಲ್ಲಿ ಒಂದು ಕೆಲಸ ಮಾಡುವುದಕ್ಕೂ ಬಿಡುತ್ತಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ, ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ” ಎಂದು ಟೀಕಾ ಪ್ರಹಾರ ನಡೆಸಿರುವ ಪ್ರತಾಪ್ ನಡೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
- Advertisement -