Saturday, June 6, 2026
Homeಕರಾವಳಿಉಡುಪಿಉಡುಪಿ: ನೇಜಾರು ತಾಯಿ ಹಾಗೂ ಮೂವರು ಮಕ್ಕಳ ಕೊಲೆ ಪ್ರಕರಣ; ಆರೋಪಿಗೆ ಎರಡನೇ ಬಾರಿ ಜಾಮೀನು...

ಉಡುಪಿ: ನೇಜಾರು ತಾಯಿ ಹಾಗೂ ಮೂವರು ಮಕ್ಕಳ ಕೊಲೆ ಪ್ರಕರಣ; ಆರೋಪಿಗೆ ಎರಡನೇ ಬಾರಿ ಜಾಮೀನು ನಿರಾಕರಿಸಿದ ಕೋರ್ಟ್

- Advertisement -
- Advertisement -

ಡುಪಿ: ನೇಜಾರು ತಾಯಿ ಹಾಗೂ ಮೂವರು ಮಕ್ಕಳ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗುಲೆಗೆ ಎರಡನೇ ಬಾರಿ ಕೋರ್ಟ್ ಜಾಮೀನು ನಿರಾಕರಿಸಿದೆ.ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಇಂದು ಆದೇಶ ನೀಡಿದೆ.

ಪ್ರವೀಣ್ ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು.

ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡು ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಕುರಿತ ಅಂತಿಮ ಆದೇಶ ನೀಡಿದರು.

- Advertisement -

Latest News

error: Content is protected !!