- Advertisement -
- Advertisement -
ಸುಳ್ಯ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾದ ಶಫೀಕ್ ಬೆಳ್ಳಾರೆ ಹಾಗೂ ಝಾಕೀರ್ ಸವಣೂರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಆರೋಪಿಗಳನ್ನು ಮೊನ್ನೆ ಕೋರ್ಟ್ ಗೆ ಹಾಜರುಪಡಿಸಿದಾಗ ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಿನ್ನೆ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಕೇಳಿದ್ದರು. ಅದರಂತೆ ಇಂದು ಆರೋಪಿಗಳನ್ನು 5 ದಿನಗಳಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
- Advertisement -