- Advertisement -
- Advertisement -
ಮಂಗಳೂರು: ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ತಾಯಿ ರತ್ನಾವತಿ ನಿನ್ನೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ನಿನ್ನೆ ಮಂಗಳೂರಿನಲ್ಲಿ ರೋಡ್ ಶೋ ದಲ್ಲಿ ಪಾಲ್ಗೊಳ್ಳಲು ಮೋದಿ ಆಗಮಿಸಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರತ್ನಾವತಿ ಪ್ರಧಾನಿಯವರನ್ನು ಸ್ವಾಗತಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಾಲಿನಲ್ಲಿ ನಿಂತು ಪ್ರಧಾನಿಗೆ ಪ್ರವೀಣ್ ತಾಯಿ ರತ್ನಾವತಿ ಸ್ವಾಗತ ಕೋರಿದ್ದಾರೆ.2022 ರ ಜುಲೈ ತಿಂಗಳಿನಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.
- Advertisement -