Sunday, June 29, 2025
Homeತಾಜಾ ಸುದ್ದಿಟೆಂಡರ್ ಪೂರ್ವ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ : ನ್ಯಾ. ರತ್ನಕಲಾ ಅಧ್ಯಕ್ಷತೆಯ ಸಮಿತಿ...

ಟೆಂಡರ್ ಪೂರ್ವ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ : ನ್ಯಾ. ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚಿಸಿ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ರಚಿಸಲಾಗಿದೆ.

ಡಿಸೆಂಬರ್ ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀಮತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರು ಗಳು ಪಾರದರ್ಶಕ, ನ್ಯಾಯಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ.

ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗಲುವ ವೆಚ್ಚದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.

- Advertisement -
spot_img

Latest News

error: Content is protected !!