Thursday, May 2, 2024
Homeತಾಜಾ ಸುದ್ದಿಮುಂಬೈ: ಡಾ.ಅಂಬೇಡ್ಕರ್ ಮನೆಯ ಹಲವು ವಸ್ತುಗಳನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

ಮುಂಬೈ: ಡಾ.ಅಂಬೇಡ್ಕರ್ ಮನೆಯ ಹಲವು ವಸ್ತುಗಳನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

spot_img
- Advertisement -
- Advertisement -

ಮಹಾರಾಷ್ಟ್ರ:ಮುಂಬೈನ ದಾದರ್ ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ನಿವಾಸಕ್ಕೆ ನುಗ್ಗಿರುವ ದುಷ್ಕರ್ಮಿಗಳು ಹಲವು ವಸ್ತುಗಳನ್ನು ನಾಶಗೊಳಿಸಿರುವ ಘಟನೆ ನಡೆದಿದೆ.

ಈವರೆಗೂ ದೇಶದ ಹಲವು ಕಡೆ ಅಂಬೇಡ್ಕರ್ ಅವರ ಮೂರ್ತಿಗಳನ್ನು ಧ್ವಂಸಗೈಯುತ್ತಿದ್ದ ಪ್ರಕರಣ ವರದಿಯಾಗುತ್ತಿತ್ತು. ಆದರೆ ಇದೀಗ ಅಂಬೇಡ್ಕರ್ ಅವರ ಐತಿಹಾಸಿಕ “ರಾಜ್ ಗೃಹ” ನಿವಾಸಕ್ಕೆ ಕಿಡಿಗೇಡಿಗಳು ನುಗ್ಗಿ ಹಲವು ಬೆಲೆಬಾಳುವ ಮತ್ತು ಪುರಾತನ ವಸ್ತುಗಳನ್ನು ನಾಶ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆ ಮನೆಗೆ ನುಗ್ಗಿರುವ ಕನಿಷ್ಠ ಇಬ್ಬರು ಅಪರಿಚಿತ ವ್ಯಕ್ತಿಗಳು ಸಿಸಿಟಿವಿ ಕ್ಯಾಮರಾ, ಗ್ಲಾಸ್ ಪ್ಯಾನ್ಸ್, ಹೂ ಕುಂಡಗಳನ್ನು ಒಡೆದು ಹಾಕಿ ಸ್ಥಳದಿಂದ ಕಾಲ್ಕಿತ್ತಿರುವುದಾಗಿ ವರದಿ ವಿವರಿಸಿದೆ.

ಈ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳಕ್ಕೆ ದಲಿತ ಸಂಘಟನೆಯ ಸದಸ್ಯರು ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಖಂಡಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!