Thursday, May 2, 2024
Homeತಾಜಾ ಸುದ್ದಿಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತ

ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತ

spot_img
- Advertisement -
- Advertisement -

ಬೆಂಗಳೂರು : ಸಿಎಂ ಯಾರು ಎನ್ನುವುದು ಇನ್ನು  ಫೈನಲ್ ಆಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ ನೀಡುತ್ತಿದ್ದಂತೆ ಇತ್ತ ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುತ್ತಿದ್ದ ಸಿಎಂ ಪ್ರಮಾಣ ವಚನ ಕಾರ್ಯಕ್ರಮದ ಸಿದ್ದತೆ ಸ್ಥಗಿತಗೊಂಡಿದೆ.

ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕಂಠೀರವ ಕ್ರೀಡಾಂಗಣದಲ್ಲಿ ಪೊಲೀಸರು ತಪಾಸಣೆಯನ್ನು ನಡೆಸಿದ್ದರು. ಅಲ್ಲದೇ ಸಕಲ ಸಿದ್ಧತೆಗಳನ್ನು ಕೂಡ ನಡೆಸಲಾಗುತಿತ್ತು. ಆದರೆ ಸಿಎಂ ಆಯ್ಕೆ ಅಂತಿಮವಾಗದ ಹಿನ್ನೆಲೆ ವಚನ ಕಾರ್ಯಕ್ರಮದ ಸಿದ್ದತೆ ಕಾರ್ಯ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಈಗಾಗಲೇ ಕಠೀರವ ಕ್ರೀಢಾಂಗಣದಲ್ಲಿ 50,000 ಜನರಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕಂಠೀರವ ಕ್ರೀಢಾಂಗಣದಲ್ಲಿ ನೂತನ ಸಂಪುಟ ಸಚಿವರು ಪ್ರಮಾಣವಚನ ಕಾರ್ಯಕ್ರಮ, ಗಣ್ಯರಿಗೆ ಯಾವ ರೀತಿಯ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯ ಮಾಡಬೇಕು ಎನ್ನುವ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸಿದ್ದರು.

- Advertisement -
spot_img

Latest News

error: Content is protected !!