ಮಂಗಳೂರು: ಕೇಂದ್ರ ಕಾರಾಗೃಹದಲ್ಲಿ ಫುಡ್ ಪಾಯಿಸ್ ನಿಂದ 45 ಕೈದಿಗಳು ಅಸ್ವಸ್ಥಗೊಂಡಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೈದಿಯನ್ನು ಜೈಲಿನ ಹೊರಗೆ ತಾವೇ ಕೈದಿಗಳು ಹೊತ್ತುಕೊಂಡು ಬಂದಿದ್ದಾರೆ. ಅಲ್ಲದೇ ಪೊಲೀಸರ ವಿರುದ್ಧ ಕೈದಿಗಳು ಆಕ್ರೋಶ ಹೊರ ಹಾಕಿದ್ದಾರೆ.ಇನ್ನು ಕೈದಿಯನ್ನು ಹೊತ್ತುಕೊಂಡ ಬಂದ ಇತರೆ ಕೈದಿಗಳು ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.ಈ ವೇಳೆ ಆಕ್ರೋಶಿತ ಕೈದಿಗಳನ್ನ ವಾಹನದಿಂದ ಹೊರಗೆಳೆದು ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಇನ್ನು ಜೈಲಲ್ಲಿ ಆಹಾರ ಸೇವಿಸಿದ ಬಳಿಕ ಕೈದಿಗಳು ಅಸ್ವಸ್ಥಗೊಂಡಿದ್ದಾರೆ. ಓರ್ವ ಕೈದಿಯ ಸ್ಥಿತಿ ತೀರ ಗಂಭೀರವಾಗಿದೆ ಎನ್ನಲಾಗಿದೆ. ಈ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಪರಿಶೀಲನೆ ನಡೆಸಿದ್ದಾರೆ. ಫುಡ್ ಪಾಯಿಸನ್ ಬಗ್ಗೆ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ. ಇವತ್ತು ಮಧ್ಯಾಹ್ನ ಉಪಹಾರ ಸೇವಿಸಿದ ಬಳಿಕ ಕೆಲವು ಕೈದಿಗಳು ಹೊಟ್ಟೆ ನೋವು ಎಂದು ದೂರು ನೀಡಿದ್ದಾರೆ. ಸಂಜೆ 4-30ರ ಬಳಿಕ 40 ಕ್ಕೂ ಅಧಿಕ ಕೈದಿಗಳಿಗೆ ಹೊಟ್ಟೆ ನೋವು, ಲೂಸ್ ಮೋಶನ್, ವಾಂತಿ ಭೇದಿ ಶುರುವಾಗಿದೆ. ನಮ್ಮ ಪೊಲೀಸ್ ವ್ಯಾನ್ ಮೂಲಕ ಎಲ್ಲಾ ಕೈದಿಗಳನ್ನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 45 ಜನರನ್ನ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ. ಜಿಲ್ಲಾ ಅರೋಗ್ಯ ಇಲಾಖೆ ಮಾಹಿತಿ ಪಡೆದು ಜೈಲಿಗೆ ಭೇಟಿ ನೀಡಿದ್ದಾರೆ. ನೀರಿನ ಸ್ಯಾಂಪಲ್ ಹಾಗು ಆಹಾರವನ್ನ ಪರಿಶೀಲನೆ ಮಾಡಿದ್ದಾರೆ.ಒಬ್ಬ ಕೈದಿ ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆ, ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು 44 ಜನ ಸಹಜ ಸ್ಥಿತಿಗೆ ಮರಳುತ್ತಿದ್ದಾರೆ.ಬೆಳಗ್ಗಿನ ಆಹಾರದಲ್ಲಿ ಫುಡ್ ಕಂಟಮಿನೆಷನ್ ಆಗಿರೋ ಮಾಹಿತಿ ಇದೆ. ಜೈಲಿನ ಮುಖ್ಯ ಅಧೀಕ್ಷಕ ಕೈದಿಗಳಿಗೆ ಅವಲಕ್ಕಿ ಸಾಂಬಾರ್ ಅನ್ನ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.ಆ ಆಹಾರದಿಂದ ಸಮಸ್ಯೆ ಎಂದು ಹೇಳುತ್ತಿದ್ದಾರೆ. ವಿವಿಧ ವಾರ್ಡ್ ನ ಸುಮಾರು 350 ಕೈದಿಗಳ ಪೈಕಿ 45 ಜನಕ್ಕೆ ಸಮಸ್ಯೆ ಎದುರಾಗಿದೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದಿದ್ದಾರೆ.