- Advertisement -
- Advertisement -
ಮೈಸೂರು: ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ದಸರಾ ಉದ್ಘಾಟನೆಗೆ ಸೆ.26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದು, ಅವರ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಪ್ರಧಾನಿಯವರು ಆಗಮಿಸ್ತಾ ಇಲ್ಲ. ಅವರ ಬದಲಾಗಿ ಕೇಂದ್ರದ 4 ಜನ ಮಂತ್ರಿಗಳು ದಸರಾ ಉದ್ಘಾಟನೆಗೆ ಆಗಮಿಸುವ ನಿರೀಕ್ಷೆಯಿದೆ. ಅದರ ಆಧಾರದ ಮೇಲೆ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಯಾರಿರಬೇಕು ಎಂಬುದು ಅಂತಿಮವಾಗಲಿದೆ ಎಂದರು.
- Advertisement -