ಬೆಂಗಳೂರು: ಚಂದ್ರಯಾನ ಯಶಸ್ವಿ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು
ಗ್ರೀಸ್ ದೇಶದ ರಾಜಧಾನಿ ಅಥೆನ್ಸ್ ನಿಂದ 9.45 ಗಂಟೆಗಳ ಪ್ರಯಾಣದ ಮೂಲಕ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಲ್ಲಿ ಬೆಳಗ್ಗೆ 5.55ಕ್ಕೆ ಬಂದಿಳಿದ ಪ್ರಧಾನಿ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ. ದಯಾನಂದ್ ಸ್ವಾಗತಿಸಿದರು.
ನಂತರ ಏರ್ ಪೋರ್ಟ್ ಹೊರಭಾಗದಲ್ಲಿ ರಾಜ್ಯ ಬಿಜೆಪಿ ವತಿಯಿಂದ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಜನರ ಬಳಿ ಹಲವಾರು ಬಾರಿ ಜೈ ವಿಜ್ಞಾನ್ ಘೋಷಣೆ ಹಾಕಿಸಿದರು.
ವೇದಿಕೆಯೇರಿ ಜನರತ್ತ ಕೈ ಬೀಸಿದ ಮೋದಿ, ಕೆಲವು ನಿಮಿಷಗಳ ಕಾಲ ಜನರನ್ನು ಉದ್ದೇಶಿಸಿ ಮಾತನಾಡಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಶ್ಲಾಘಿಸಿದರು.