- Advertisement -
- Advertisement -
ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ನಡೆದಿದೆ.
ಪಡ್ಡಂಗಡಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಎಂಟು ಪ್ರಯಾಣಿಕರು ಗಾಯಗೊಂಡಿದ್ದಾರೆ.ಉಡುಪಿಯಿಂದ ಬೆಂಗಳೂರಿಗೆ ಹೋಗುವ ವಿಶಾಲ್ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿದ್ದು ಗಾಯಾಳುಗಳನ್ನು ಮೂಡಬಿದಿರೆಯ ಆಸ್ಪತ್ರೆ ದಾಖಲಿಸಲಾಗಿದೆ.
ವೇಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ಸಂಭವಿಸಿದೆ.
- Advertisement -