- Advertisement -
- Advertisement -
ನವದೆಹಲಿ: ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರ ಪ್ರತಿಭಟನೆ ಮುಗಿಲು ಮುಟ್ಟಿದೆ. ಇದರ ಬೆನ್ನಲ್ಲೆ ಮಧ್ಯಸ್ಥಿಕೆ ವಹಿಸುವುದಾಗಿ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.
ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮೆರವಣಿಗೆ ಹೊರಟಿದ್ದರು. ಈವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
- Advertisement -