ಹಾಸನ : ನನ್ನ ತಾಯಿ ಭವಾನಿ ರೇವಣ್ಣ ಅವರಿಗೆ ಹಾಸನ ಜೆಡಿಎಸ್ ಟಿಕೆಟ್ ನೀಡದೇ ಇದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಹಾಗೂ ಹೆಚ್. ರೇವಣ್ಣ ಕುಟುಂಬಗಳ ನಡುವೆ ಸಾಕಷ್ಟು ಜಟಾಪಟಿ ನಡೆಯುತ್ತಿದೆ. ಕಳೆದ ಒಂದು ತಿಂಗಳಿಂದ ಕುಟುಂಬದ ಪೈಪೋಟಿ ಜೋರಾಗಿದೆ. ಇದೀಗ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಗೊಂದಲ ಉಂಟಾಗಿದ್ದು, ಅಮ್ಮನಿಗೆ ಟಿಕೆಟ್ ನೀಡುವಂತೆ ಪ್ರಜ್ವಲ್ ರೇವಣ್ಣ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಅಮ್ಮನಿಗೆ ಟಿಕೆಟ್ ಕೊಡಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಇದಕ್ಕೆ ಹೆಚ್ . ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಯಾವುದೇ ಬ್ಲಾಕ್ ಮೇಲ್ ನಡೆಯಲ್ಲ. ನನ್ನ ಸ್ಟ್ಯಾಂಡ್ ನಲ್ಲಿ ಬದಲಾವಣೆ ಇಲ್ಲ ಎಂದು ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಈ ಮಧ್ಯಯೇ ಸ್ವರೂಪ್ ಪ್ರಕಾಶ್ ಹೆಚ್. ಡಿ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಹೀಗಾಗಿ ಹಾನಸ ಕ್ಷೇತ್ರದಲ್ಲಿ ಟಿಕೆಟಕ್ ಹಂಚಿಕೆ ಕುರಿತು ಸಾಕಷ್ಟು ಕೂತಹಲ ಮೂಡಿದೆ.